ಹೌದು ಬಿಲ್ವಪತ್ರೆ ಇರುವುದು ಪೂಜೆಗೆ ಮಾತ್ರ ಅನ್ನೋದು ಎಷ್ಟೋ ಜನರಲ್ಲಿರುವ ನಂಬಿಕೆ. ಈ ಮಾತು ಸಹ ಸತ್ಯ ಬಿಲ್ವಪತ್ರೆಯನ್ನ ತುಂಬ ಜನ ಶಿವನ ಪೂಜೆಗೆ ಬಳಸುವುದು ಸಹಜ. ಆದ್ರೆ ಅದೇ ಬಿಲ್ವಪತ್ರೆ ಎಷ್ಟೋ ರೋಗಗಳನ್ನು ಹೋಗಲಾಡಿಸುತ್ತೆ ಅನ್ನೋದು ತುಂಬ ಮಂದಿಗೆ ತಿಳಿದಿಲ್ಲ. ಹಾಗಾಗಿ ಈ ವಿಚಾರವನ್ನು ತಿಳಿಸುತ್ತೇವೆ.

ಬಿಲ್ವಪತ್ರೆಯ ಉಪಯೋಗಗಳು ಇದರ ಎಲೆಗಳು ಶಿವಪೂಜೆಯಲ್ಲಿ ಶ್ರೇಷ್ಟವೆಂದು ಪರಿಗಣಿತವಾಗಿದೆ. ಇದರ ಬೇರು, ಎಲೆಗಳು, ತೊಗಟೆ, ಹಣ್ಣಿನ ತಿರುಳು ಆಯುರ್ವೇದದಲ್ಲಿ ಔಷಧವಾಗಿ ಉಪಯೋಗಿಸಲ್ಪಡುತ್ತದೆ. ಕಾಯಿಯ ತಿರುಳು ಗಾರೆಗೆ ಬಲ ಕೊಡಲು ಉಪಯೋಗವಾಗುತ್ತದೆ.

ಚರ್ಮದ ಸಮಸ್ಯೆಗಳು : ದೇಹದ ಚರ್ಮದ ದುರ್ಗಂಧವನ್ನು ನಿವಾರಿಸಲು ತಾಜಾ ಬಿಲ್ವಪತ್ರೆ ರಸವನ್ನು ಪ್ರತಿದಿನ ಮೈಗೆ ಚೆನ್ನಾಗಿ ಲೇಪಿಸಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡಬೇಕು. ದೇಹದ ಮೇಲೆ ಕುರುಗಳು ಇದ್ದಾಗ ಬಿಲ್ವ ವೃಕ್ಷದ ಬೇರನ್ನು ನಿಂಬೆರಸದಲ್ಲಿ ತೇಯ್ದು ಲೇಪಿಸುತ್ತಿರಬೇಕು..

ತಲೆನೋವು : ತಲೆನೋವು ಸಮಸ್ಯೆ ಇದ್ದಾಗ ಬಿಲ್ವದ ಮರದ ಒಣಬೇರನ್ನು ಅರೆದು ಹಣೆಗೆ ಲೇಪಿಸಬೇಕು.

ತಲೆಕೂದಲಿನ ಸಮಸ್ಯೆಗಳು : ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ನತರ ಅದರ ತಿರುಳನ್ನು ತೆಗೆದು ನುಣ್ಣ ಗೆ ಅರೆದು ತಲೆಗೆ ಲೇಪಿಸಿಕೊಡು ಅರ್ಧ ಗಂಟೆಯ ನಂತರ ತೊಳೆಯಬೇಕು. ಇದನ್ನು ದಿನಕ್ಕೊಮ್ಮೆಯಂತೆ ಹದಿನೈದು ದಿನಗಳ ಕಾಲ ಮಾಡುವುದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ. ತಲೆ ಸ್ನಾನವನ್ನು ಮಾಡುವ ಅರ್ಧಗಂಟೆಯ ಮೊದಲು ಬಿಲ್ವಪತ್ರೆಯನ್ನು ಅರೆದು ತಲೆಗೆ ಲೇಪಿಸಿಕೊಳ್ಳಬೇಕು. ಇದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ಅಕಾಲ ನರೆಕೂದಲು ಸಮಸ್ಯೆ ನಿವಾರಣೆಯಾಗುತ್ತದೆ.

ಮಾನಸಿಕ ಸಮಸ್ಯೆಗಳು : ನಿದ್ರಾಹೀನತೆಯಿಂದ ಬಳಲುತ್ತಿರುವವರು ಬಿಲ್ವದ ಎಲೆಯನ್ನು ನೀರು ಸೇರಿಸದೆ ಅರೆದು ಹಣೆಗೆ ಲೇಪಿಸಿಕೊಳ್ಳಬೇಕು. ಇದರಿಂದ ಒಳ್ಳೆಯ ನಿದ್ದೆ ಬರುತ್ತದೆ. ನಿಶ್ಯಕ್ತಿ : ಬಿಲ್ವಪತ್ರೆಯ ರಸವನ್ನು ಪ್ರತಿದಿನ ೨ – ೩ ಚಮಚೆಯ ಸೇವಿಸುತ್ತಿದ್ದರೆ ನಿಶ್ಯಕ್ತಿ ದೂರವಾಗುತ್ತದೆ.ನಿಶ್ಯಕ್ತಿ , ಆಯಾಸದಿಂದ ಬಳಲುತ್ತಿರುವವರು ದಿನದಲ್ಲಿ ಮೂರು ಬಾರಿ ದಶಮೂಲಾರಿವನ್ನು ಎರಡೆರಡು ಚಮಚೆಯಂತೆ ಸೇವಿಸಬೇಕು.

ಕಣ್ಣಿನ ಸಮಸ್ಯೆಗಳು : ಕಣ್ಣಿನಲ್ಲಿ ಉರಿ , ತುರಿಕೆ ಇದ್ದಾಗ ಬಿಲ್ವಪತ್ರೆಯನ್ನು ನುಣ್ಣಗೆ ಅರೆದು ಕಣ್ಣಿನ ಮೇಲೆ ಲೇಪಿಸಿಕೊಳ್ಳಬೇಕು. ಕಣ್ಣಿನ ಸೋಂಕು ಇದ್ದಾಗ ಅಥವಾ ಕಣ್ಣು ಕೆಂಪಾದಾಗ ಮಾಡಬಹುದಾದ ಚಿಕಿತ್ಸೆ ಇದು – ಒಂದು ಹಿಡಿಯ ಬಿಲ್ವದ ಎಳೆಯ ಎಲೆಗಳನ್ನು ಸಂಗ್ರಹಿಸಿ ಮಣ್ಣಿನ ಕುಡಿಕೆಗೆ ಹಾಕಿ ಹುರಿಯಬೇಕು. ಅದು ಸ್ವಲ್ಪ ಬಿಸಿ ಇರುವಾಗಲೇ ಒಂದು ಬಟ್ಟೆಯಲ್ಲಿ ಹಾಕಿ ಕಣ್ಣಿನ ಮೇಲಿಡಬೇಕು. ಸ್ವಲ್ಪ ನೀರಿನಲ್ಲಿ ಬಿಲ್ವದ ಹೂಗಳನ್ನು ನೆನೆಸಿಟ್ಟು ನಂತರ ಶೋಧಿಸಿ ಆ ನೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳುತ್ತಿದ್ದರೆ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ.

ಬಾಯಿಯ ಸಮಸ್ಯೆಗಳು : ಬಾಯಿಯಲ್ಲಿ ಹುಣ್ಣಾಗಿದ್ದಾಗ ಬಿಲ್ವಪತ್ರೆ ಹಣ್ಣಿನ ತಿರುಳಿಗೆ ಸ್ವಲ್ಪ ಬೆಲ್ಲ ಸೇರಿಸಿ ದಿನದಲ್ಲಿ ಒಂದು ಬಾರಿ ಸೇವಿಸಬೇಕು. ಅಜೀ ಸಮಸ್ಯೆಯಿಂದ ಅಥವಾ ಹೊಟ್ಟೆ ಹುಣ್ಣಿನ ಸಮಸ್ಯೆ ಯಿಂದ ವಾಂತಿ ಆಗುತ್ತಿದ್ದರೆ ಎರಡು ಚಮಚೆ ಬಿಲ್ವಪತ್ರೆ ರಸಕ್ಕೆ ಒಂದು ಚಮಚೆ ಜೇನುತುಪ್ಪ ಸೇರಿಸಿ ದಿನದಲ್ಲಿ ೨-೩ ಬಾರಿ ನೆಕ್ಕಬೇಕು. ಬಿಲ್ವ ಫಲದ ಚಿಪ್ಪನ್ನು ಅರೆದು ಜೀನುತುಪ್ಪದಲ್ಲಿ ಸೇರಿಸಿ ಸೇವಿಸುತ್ತಿದ್ದರೆ ವಾಕರಿಕೆ ನಿಲ್ಲುತ್ತದೆ.

ನೆಗಡಿ, ಕೆಮ್ಮು , ದಮ್ಮು , ಶ್ವಾಸಕೋಶದ ಸಮಸ್ಯೆಗಳು : ಕ್ಷಯರೋಗದಿಂದ ಬಳಲುತ್ತಿರುವವರು ೪೦ ದಿನಗಳವರೆಗೆ ಊಟದ ನಂತರ ಬಿಲ್ವದ ಹಣ್ಣಿಗೆ ಸ್ವಲ್ಪ ಸಕ್ಕರೆ ಮತ್ತು ಜೀನುತುಪ್ಪ ಸೇರಿಸಿ ತಿನ್ನಬೇಕು. ನೆಗಡಿಯಾದಾಗ ಬಿಲ್ವಪತ್ರೆಯ ರಸವನ್ನು ಸ್ವಲ್ಪ ಸ್ವಲ್ಪ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮುಂಜಾನೆ ಎದ್ದಕೂಡಲೇ ಒಂದು ಬಿಲ್ವದ ಎಲೆಯನ್ನು ೨-೩ ಕಾಳುಮೆಣಸಿನೊಂದಿಗೆ ಬಾಯಿಗೆ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದನ್ನು ೩೦-೪೦ ದಿನಗಳ ಕಾಲ ಮಾಡಬೇಕು.

ಹೃದಯದ ಸಮಸ್ಯೆಗಳು : ಆಗಾಗ ಹೃದಯದ ಬಡಿತ ತಪ್ಪು ವ ಪಾಲ್ಪಿಟೇಶನ್ ಸಮಸ್ಯೆ ಇರುವವರು ಬಿಲ್ವ ಮರದ ಬೇರಿನ ತೊಗಟೆಯ ಕಷಾಯವನ್ನು ಕುಡಿಯುತ್ತಿರಬೇಕು. ಬಿಲ್ವದ ಎಲೆಗಳನ್ನು ಚೆನ್ನಾಗಿ ಒಣಗಿಸಿ ಚೂರ್ಣ ಮಾಡಿ ಸಂಗ್ರಹಿಸಿಡಬೇಕು. ರಕ್ತದ ಅಧಿಕ ಒತ್ತಡ ಇರುವವರು ಅರ್ಧದಿಂದ ಒಂದು ಚಮಚೆಯ ಈ ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಸೇರಿಸಿ ಕುದಿಸಿ, ತಣಿಸಿ ದಿನದಲ್ಲಿ ೨-೩ ಬಾರಿ ಕುಡಿಯುತ್ತ್ತಿದ್ದರೆ ಪ್ರಯೋಜನವಾಗುತ್ತದೆ.

ಹೊಟ್ಟೆಯ ಸಮಸ್ಯೆ ಗಳು: ಭೇದಿ ಮುಂತಾದ ಹೊಟ್ಟೆಯ ಸಂಬಂಧಿ ಸಮಸ್ಯೆಗಳಿದ್ದಾಗ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸ್ವಲ್ಪ ಬಿಲ್ವದ ಹಣ್ಣನ್ನು ದಾಲ್ಚಿನ್ನಿ ಪುಡಿಯೊಂದಿಗೆ ಕಲೆಸಿ ಸೇವಿಸಬೇಕು. ಸಮಪ್ರಮಾಣದ ಬಿಲ್ವದ ತಿರುಳು ಮತ್ತು ಎಳ್ಳನ್ನು ಅರೆದು ಸ್ವಲ್ಪ ಬೆಣ್ಣೆ ಮತ್ತು ತುಪ್ಪದಲ್ಲಿ ಸೇರಿಸಿ ಸೇವಿಸುತ್ತಿದ್ದರೆ, ಭೇದಿ ಮುಂತಾದ ಮಲಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ. ಭೇದಿ, ಅತಿಸಾರದಿಂದ ಬಳಲುತ್ತಿರುವವರು ಎರಡು ಚಮಚೆಯ ಬಿಲ್ವಪತ್ರೆ ರಸವನ್ನು ಸ್ವಲ್ಪ ಜೇನುತುಪ್ಪದೊಂದಿಗೆ ದಿನದಲ್ಲಿ ೩-೪ ಬಾರಿ ಸೇವಿಸಬೇಕು. ಬೇಲದ ಹಣ್ಣಿನ ತಿರುಳನ್ನು ಒಣಗಿಸಿ ಸ್ವಲ್ಪ ಸೋಂಪು ಕಾಳು ಸೇರಿಸಿ ಪುಡಿಮಾಡಿಟ್ಟು ಕೊಳ್ಳ ಬೇಕು. ರಕ್ತಭೇದಿ ಸಮಸ್ಯೆ ಇದ್ದಾಗ ಈ ಚೂರ್ಣವನ್ನು ಒಂದು ಚಮಚೆಯ ತೆಗೆದುಕೊಂಡು ಜೇನುತುಪ್ಪದಲ್ಲಿ ಬೆರೆಸಿ ಸೇವಿಸಬೇಕು. ಊಟ ಸೇರದಿರುವುದು, ಹಸಿವೆ ಇಲ್ಲದಿರುವುದು ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ನಾಲ್ಕೈದು ಬಿಲ್ವ ಪತ್ರೆ ಎಲೆಯನ್ನು ಪ್ರತಿದಿನ ಮುಂಜಾನೆ ಬೆಳಗ್ಗೆ ಚೆನ್ನಾಗಿ ಅಗಿದು ತಿನ್ನಬೇಕು. ಇದನ್ನು ಮೂರು ದಿನಗಳ ಕಾಲ ಮಾಡಬೇಕು.

ಬೊಜ್ಜು: ಬೊಜ್ಜಿನ ಸಮಸ್ಯೆ ಇರುವವರು ಬಿಲ್ವ , ಅಗ್ನಿಮಂಥ, ಆನೆಮೊಗ್ಗು , ಶಿವನಿ ಮತ್ತು ಪದರಿ ಈ ಮರಗಳ ಬೇರಿನ ಕಯವನ್ನು ಸ್ವಲ್ಪ ಜೇನುತುಪ್ಪ ಬೆರೆಸಿ ಕುಡಿಯುತ್ತಿದ್ದರೆ ಸಮಸ್ಯೆಯ ನಿವಾರಣೆಯಾಗುತ್ತದೆ.

ಗಾಯ,ಹುಣ್ಣು: ದೇಹದ ಮೇಲೆ ಗಾಯವಾಗಿ ಅದು ಕೊಳೆಯುವ ಸ್ಥಿತಿ ತಲಪಿದಾಗ (ಗ್ಯಾಂಗ್ರೀನ್ ) ಆ ಜಾಗದಲ್ಲಿ ಬಿಲ್ವಪತ್ರೆಯನ್ನು ಅರೆದು ಪೌಲ್ಟೀಸು ಕಟ್ಟಿದರೆ ಬೇಗ ಗುಣವಾಗುತ್ತದೆ. ಸುಟ್ಟ ಗಾಯದ ಮೇಲೆ ಬಿಲ್ವಪತ್ರೆ ರಸವನ್ನು ಲೇಪಿಸುತ್ತಿದ್ದರೆ ಬೇಗ ಮಾಯುತ್ತದೆ.

ನೋವು, ಬಾವು, ಊತ : ಕಾಲು ಅಥವಾ ದೇಹದ ಬೇರಾವುದೇ ಭಾಗದಲ್ಲಿ ಊತ ಇದ್ದಾಗ ಬಿಲ್ವಪತ್ರೆ ರಸಕ್ಕೆ ಕಾಳುಮೆಣಸು ಪುಡಿ ಸೇರಿಸಿ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ. ಮೈಕೈ ನೋವು ಸಮಸ್ಯೆ ಯಿಂದ ಬಳಲುತ್ತಿರುವವರು ಬಿಲ್ವಪತ್ರೆ ಎಲೆ, ಬೇವಿನ ಎಲೆ ಮತ್ತು ಹರಳು ಗಿಡದ ಎಲೆಗಳನ್ನು ನೀರಿಗೆ ಸೇರಿಸಿ ಕುದಿಸಿ ಆ ನೀರನ್ನು ಸ್ನಾನದ ನೀರಿಗೆ ಮಿಶ್ರ ಮಾಡಿ ಪ್ರತಿ ದಿನ ಸ್ನಾನ ಮಾಡಬೇಕು. ಬಿಲ್ವದ ತಿರುಳಿಗೆ ಸಾಸಿವೆ ಎಣ್ಣೆ ಸೇರಿಸಿ ಕಲೆಸಿ ಬಿಸಿ ಮಾಡಿ ಊತ, ಬಾವು ಇರುವಲ್ಲಿ ಇಟ್ಟರೆ ಪ್ರಯೋಜನವಾಗುತ್ತದೆ.

Leave a Reply

Your email address will not be published. Required fields are marked *