ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಶೀತ, ಕೆಮ್ಮು ಹಾಗೂ ನೆಗಡಿ ಸಮಸ್ಯೆಗಳು ಮಳೆಗಾಲದಲ್ಲಿ ಆವರಿಸಿಕೊಳ್ಳುತ್ತದೆ. ಇಂತಹ ತೊಂದರೆಗಳು ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯತ್ತ ಮುಖ ಮಾಡುವವರೇ ಹೆಚ್ಚು. ಆದರೆ ಅಡುಗೆ ಮನೆಯಲ್ಲಿರುವ ಕೆಲ ಪದಾರ್ಥಗಳನ್ನು ಬಳಸುವುದರಿಂದ ಇಂತಹ ಸಮಸ್ಯೆಗಳಿಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳಬಹುದು. ಅಂತಹ ಕೆಲವೊಂದು ಮನೆಮದ್ದುಗಳನ್ನು ಇಲ್ಲಿ ತಿಳಿಸಲಾಗಿದೆ.ನಿಂಬೆ, ಕಲ್ಲು ಸಕ್ಕರೆ ಮತ್ತು ಕಾಳುಮೆಣಸನ್ನು ಸೇರಿಸಿ ಗಟ್ಟಿಯಾದ ಪಾಕವನ್ನು ಮಾಡಿಕೊಳ್ಳಬೇಕು. ಈ ಪಾಕವನ್ನು ದಿನವೂ 2 ಚಮಚ ಸೇವಿಸುತ್ತಾ ಬಂದರೆ ಕಫ ಕಡಿಮೆಯಾಗುವುದಲ್ಲದೇ ಕೆಮ್ಮಿನ ಸಮಸ್ಯೆ ದೂರವಾಗುತ್ತದೆ.ಶುಂಠಿಯ ಚಹಾವನ್ನು ಮಾಡಿ ಕುಡಿಯುವುದರಿಂದ ಸಹ ನೆಗಡಿ ಮತ್ತು ಕಫವನ್ನು ನಿವಾರಿಸಿಕೊಳ್ಳಬಹುದು. ಈ ವೇಳೆ ಬ್ಲ್ಯಾಕ್ ಟೀ ಮಾಡಿಕೊಳ್ಳುವುದು ಉತ್ತಮ.

ಒಂದು ಲೋಟ ನೀರಿಗೆ ಶುಂಠಿ, ನಿಂಬೆ ರಸ, ಕಾಳು ಮೆಣಸು ಮತ್ತು ಬೆಲ್ಲವನ್ನು ಹಾಕಿ ಕುದಿಸಬೇಕು. ಇದನ್ನು ಬಿಸಿ ಆರುವ ಮುನ್ನವೇ ಕುಡಿಯುವುದರಿಂದ ನೆಗಡಿ ಮತ್ತು ಕಫ ಕಡಿಮೆಯಾಗುತ್ತದೆ. ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ. ಉಪ್ಪಿನ ಜೊತೆ ಶುಂಠಿ ಮತ್ತು ಲವಂಗವನ್ನು ಸೇರಿಸಿ ಅಗಿಯುವುದರಿಂದ ಕಫ ಮತ್ತು ಗಂಟಲ ಕೆರೆತವನ್ನು ದೂರ ಮಾಡಬಹುದು.ಇನ್ನು ಒಣ ಕೆಮ್ಮು ಇದ್ದರೆ ಏಲಕ್ಕಿ ಮತ್ತು ಶುಂಠಿ ಪುಡಿಯನ್ನು ಸೇರಿಸಿಕೊಂಡು ಸೇವಿಸುವುದು ಉತ್ತಮ.ಹಾಗೆಯೇ ನೆಲ್ಲಿಕಾಯಿಯನ್ನು ಸೇವಿಸುತ್ತಿದ್ದರೆ ನೆಗಡಿ, ಕೆಮ್ಮು, ಕಫದ ಸಮಸ್ಯೆಯಿಂದ ದೂರವಿರಬಹುದು.

ಬಿಸಿ ಹಾಲಿಗೆ ಅರಿಶಿಣ ಮತ್ತು ಕಲ್ಲುಸಕ್ಕರೆಯನ್ನು ಬೆರೆಸಿ ರಾತ್ರಿ ಮಲಗುವ ಮುನ್ನ ಕುಡಿದರೂ ಕಫ ಮತ್ತು ನೆಗಡಿ ಕಡಿಮೆಯಾಗುತ್ತದೆ.ಜೇನು ಮತ್ತು ನಿಂಬೆರಸದೊಂದಿಗೆ ದಾಲ್ಚಿನಿಯನ್ನು ಸೇರಿಸಿ ಸೇವಿಸಿದರೂ ನೆಗಡಿ ಮತ್ತು ಕಫದ ಸಮಸ್ಯೆ ದೂರವಾಗುತ್ತದೆ.ನೆಗಡಿ ಅಥವಾ ಕೆಮ್ಮು ಉಂಟಾದಾಗ ಬೆಚ್ಚಗಿನ ನೀರನ್ನು ಕುಡಿಯುವುದು ಉತ್ತಮ. ಇದರಿಂದ ಗಂಟಲಿನ ಉರಿಯೂತ ಕಡಿಮೆಯಾಗುತ್ತದೆ. ಕೆಮ್ಮು ಉಂಟಾಗುವ ಸಂದರ್ಭದಲ್ಲಿ ಕಲ್ಲು ಸಕ್ಕರೆ ಮತ್ತು ಲವಂಗವನ್ನು ಸೇವಿಸಿದರೆ ಸಮಸ್ಯೆ ಕಡಿಮೆಯಾಗುತ್ತದೆಒಂದು ಚಮಚ ಜೇನುತುಪ್ಪಕ್ಕೆ ಅದರ ಕಾಲು ಭಾಗ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಸೇವಿಸಿದರೆ ಕಫದ ಸಮಸ್ಯೆಗೆ ಪರಿಹಾರ ಕಾಣಬಹುದು.

Leave a Reply

Your email address will not be published. Required fields are marked *