ಬೆಳಗ್ಗೆಯ ಸಮಯದಲ್ಲಿ ಹಲ್ಲುಜ್ಜಿದ ನಂತರ ಹಸಿದ ಹೊಟ್ಟೆಯಲ್ಲೇ ಸ್ವಲ್ಪ ಕರಿಬೇವು ಹಾಗೂ ಅರ್ಧ ಚಮಚ ಜೀರಿಗೆಯನ್ನು ಸೇವಿಸುವ ರೂಢಿ ಮಾಡಿಕೊಂಡರೆ ಅನೇಕ ಲಾಭಗಳಿವೆ. ಕೂದಲು ಉದುರುವಿಕೆ ಕಡಿಮೆ ಆಗುತ್ತದೆ. ದೃಷ್ಟಿ ದೋಷ ಸಮಸ್ಯೆಗೂ ಪರಿಹಾರ ನೀಡಬಲ್ಲುದು.

ಖಾಲಿ ಹೊಟ್ಟೆಗೆ ಕರಿಬೇವು ಸೇವನೆ ಗ್ಯಾಸ್ಟ್ರಿಕ್‌ ಹಾಗೂ ಅಸಿಡಿಟಿಯಿಂದ ಮುಕ್ತರಾಗಬಹುದು, ಕೀಲುನೋವು ಕಡಿಮೆಯಾಗುತ್ತದೆ ಮತ್ತು ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಸಂಧಿ ನೋವು ಮುಂತಾದ ಸಮಸ್ಯೆಗಳಿಗೆ ಕರಿಬೇವು ಸೇವನೆ ಪರಿಹಾರ ನೀಡುತ್ತದೆ.

ಕರಿಬೇವು ಸೇವನೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸುತ್ತದೆ. ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ನೀಡುತ್ತದೆ, ಕಹಿಬೇವನ್ನು ಅರೆದು ಮುಂಜಾನೆ ಕುಡಿದರೆ ದೊಡ್ಡವರಲ್ಲಿ ಜಂತು ಹುಳುವಿನ ಸಮಸ್ಯೆ ಉಂಟಾಗುವುದಿಲ್ಲ, ವಾಯು ಸಂಬಂಧಿ ಸಮಸ್ಯೆಯನ್ನೂ ನಿವಾರಿಸುವ ಶಕ್ತಿ ಇದಕ್ಕಿದೆ.

ಹಸಿದ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ, ಹೊಟ್ಟೆಯನ್ನು ಬ್ಯಾಕ್ಟೀರಿಯಾದಿಂದ ಮುಕ್ತಗೊಳಿಸುತ್ತದೆ, ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಉದ್ವೇಗ ಹಾಗೂ ಆತಂಕದಿಂದ ಎದೆಬಡಿತ ಹೆಚ್ಚುವ ಸಮಸ್ಯೆ ನಿಮ್ಮಲ್ಲಿದ್ದರೆ ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಸೀಬೆ ಹಣ್ಣು ಸೇವಿಸುವುದು ಅತ್ಯುತ್ತಮ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *