ನಿತ್ಯ ನಿಯಮಿತವಾಗಿ ಹಸಿ ಕೊಬ್ಬರಿ ತಿಂದ್ರೆ, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇನ್ಫೆಕ್ಷನ್ ಅಂತಹ ರೋಗಗಳು ಬರುವುದಿಲ್ಲ. ಆಂಟಿ ವೈರಲ್, ಆಂಟಿ ಬ್ಯಾಕ್ಟೀರಿಯಾ, ಆಂಟಿ ಫಂಗಲ್, ಆಂಟಿ ಪ್ಯಾರಾಸೈಟ್ ಗುಣಗಳು ಕೊಬ್ಬರಿಯಲ್ಲಿ ಹೇರಳವಾಗಿ ಇರುವುದರಿಂದ ಬ್ಯಾಕ್ಟೀರಿಯಾ, ವೈರಸ್‍ಗಳಿಂದ ರಕ್ಷಣೆ ಸಿಗುತ್ತದೆ. ಮಧುಮೇಹ ಸಮಸ್ಯೆಯಿಂದ ನರಳುತ್ತಿರುವವರು ಹಸಿ ಕೊಬ್ಬರಿ ತಿಂದರೆ ಒಳಿತಾಗುತ್ತದೆ. ಇದರಿಂದ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬಂದು ಡಯಾಬಿಟೀಸ್ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಆರ್ಯವೇದದವರು ಹೇಳುತ್ತಾರೆ.

ಜೀರ್ಣ ಸಮಸ್ಯೆಗಳು ದೂರವಾಗುತ್ತವೆ. ಜೀರ್ಣಕೋಶ ಶುದ್ಧವಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಸಮಸ್ಯೆಗಳು ಬರುವುದಿಲ್ಲ. ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಥೈರಾಯ್ಡ್ ಸಮಸ್ಯೆಗಳಿರುವವರು ಹಸಿ ಕೊಬ್ಬರಿ ತಿನ್ನುವುದನ್ನು ಅಭ್ಯಾಸ ಮಾಡಿಕೊಂಡರೆ ಒಳ್ಳೆಯ ಫಲಿತಾಂಶ ಸಿಗುತ್ತದೆ. ಥೈರಾಯ್ಡ್ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *