ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ ಬಿ ವರ್ಗದ ಅಭ್ಯರ್ಥಿಗಳಿಗೆ.

ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.ವೇತನ, ಬೆರಳಚ್ಚುಗಾರರು ಹುದ್ದೆಗೆ ಮಾಸಿಕ ರೂಪಾಯಿ 21,400 ರಿಂದ 42,000 ಜವಾನ ಹುದ್ದೆಗೆ ಮಾಸಿಕ ರೂಪಾಯಿ 17 ಸಾವಿರದಿಂದ 28000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.ಆಯ್ಕೆ ವಿಧಾನ, ಬೆರಳಚ್ಚುಗಾರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮತ್ತು ಸಂದರ್ಶನದಲ್ಲಿ ಪಡೆದ ಅಂಕ ಇವುಗಳ ಮತದ ಆಧಾರದ ಮೇಲೆ ಜೇಷ್ಠತೆ ಅನುಸಾರ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು.

ಜವಾನ ಹುದ್ದೆಗೆ 10 ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ, ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹200 ಪ್ರವರ್ಗ, ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.ಶುಲ್ಕ ಪಾವತಿಸುವ ವಿಧಾನ ಆನ್‌ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಲಿಂಕ್ https://bengalururural.dcourts.gov.in/online-recruitment/
ಹುದ್ದೆ ಹೆಸರು, ಬೆರಳಚ್ಚುಗಾರರು ಹಾಗೂ ಜವಾನ ಹುದ್ದೆಗಳ ಸಂಖ್ಯೆ ಒಟ್ಟು 58 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಬೆರಳಚ್ಚುಗಾರರು 30 ಹುದ್ದೆ ಜವಾನ ಇಪ್ಪತೆಂಟು ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ, ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಪ್ರೌಢದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೋಮಾ ಇನ್ ಕಾಮರ್ಸ್ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನರಿಗೆ ಹತ್ತನೆಯ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.

Leave a Reply

Your email address will not be published. Required fields are marked *