ನಮಗೆ ಗೊತ್ತಿರುವ ಹಾಗೆ ಕೋಡಿಮಠ ಶ್ರೀಗಳು ತಮ್ಮ ಭವಿಷ್ಯ ಹೇಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ ಕೆಲವೊಮ್ಮೆ ಹೇಳಿದ ಮಾತುಗಳು ಸತ್ಯವಾದರೆ ಇನ್ನ ಕೆಲವು ಮಾತು ಸುಳ್ಳಾಗಿದೆ. ಆದರೆ ಹಿಂದೆ ಹೇಳಿದ ಸರ್ಕಾರದ ಬಗ್ಗೆ ಇವರ ಭವಿಷ್ಯ ಸತ್ಯವಾಗಿದೆ ಆದರೆ ಸದ್ಯಕ್ಕೆ ಹೇಳುವ ಭವಿಷ್ಯ ಎಷ್ಟರಮಟ್ಟಿಗೆ ಸತ್ಯವಾಗಲಿದೆ ಎಂದು ನಾವು ಕಾದು ನೋಡಬೇಕಿದೆ ಅವರು ಹೇಳಿದ ಭವಿಷ್ಯ ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ ಈಗ ಮತ್ತೊಂದು ಕೊಡಿ ಶ್ರೀಗಳು ಭವಿಷ್ಯವನ್ನು ನುಡಿದಿದ್ದಾರೆ ಮತ್ತೊಂದು ಗಂಡಾಂತರ ಹಾಗಾದ್ರೆ ಏನಿದು ಮತ್ತೆ ಕೋಡಿಶ್ರೀಗಳು ಭವಿಷ್ಯ ನುಡಿದರೆ ಮತ್ತೆ ರಾಜ್ಯಕ್ಕೆ ಕಾದಿದೆಯಾ ಗಂಡಾಂತರ ಆ ದೊಡ್ಡ ಗಂಡಾಂತರ ಏನು ಎಂಬ ಸುದ್ದಿಯನ್ನ ನೋಡೋಣ ಬನ್ನಿ.

ಹೌದು ಕರ್ನಾಟಕದಲ್ಲಿ ಜಲಪ್ರಳಯ ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ ಕೋಡಿಶ್ರೀ ಭವಿಷ್ಯ ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯವಾಗುವ ಲಕ್ಷಣ ಇದೆ ಎಂದು ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಸ್ಫೋಟಕ ಭವಿಷ್ಯವನ್ನೂ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ. ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜವಾಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯವಾಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ಜಾಗತಿಕ ಮಟ್ಟದಲ್ಲಿ ದುರಂತ ನಡೆಯಲಿದೆ. ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ನಡೆಯಲಿವೆ. ಒಂದೆರಡು ರಾಷ್ಟ್ರಗಳು ಮುಚ್ಚಿಹೋಗಲಿದೆ ಎಂದು ಶ್ರೀಗಳು ಹೇಳಿದ್ದಾರೆ.

ಜನರ ಅಕಾಲಿಕ ಮೃತ್ಯುವಾಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿಯವರೆಗೆ ಜಗತ್ತಿನಲ್ಲಿ ದುರ್ಘಟನೆಗಳು ನಡೆಯಲಿವೆ.ಆದರೆ ಗಂಡಾಂತರದಿಂದ ಪಾರಾಗಬಹುದು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಅವರು ಹೇಳಿದ್ದಾರೆ. ಇನ್ನು ಕರುನಾಡಿಗೆ ಕೆಲವೊಂದು ಆಪತ್ತುಗಳಿವೆ. ಕೆಲ ನೋವುಗಳು ಆಗಲಿವೆ. ಆದರೆ ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂತಹ ಒಂದು ಘಟನೆ ಸಂಭವಿಸಲಿದೆ.

ತಪ್ಪಿಸುವ ಹೊಣೆಗಾರಿಕೆ ಆಳುವವರ ಕೈಯಲ್ಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆ ಎಂದು ಸ್ವಾಮಿಜಿ ನುಡಿದಿದ್ದಾರೆ.ಅಸ್ಥಿರತೆ, ಯುದ್ಧ ಭೀತಿ. ಅಣು ಬಾಂಬ್ ಸ್ಫೋಟವಾಗುವ ಅವಕಾಶವಿದೆ ಎಂದು ಕೋಡಿ ಶ್ರೀಗಳು ಭವಿಷ್ಯದ ಕುರಿತು ತಿಳಿಸಿದ್ದಾರೆ.

Leave a Reply

Your email address will not be published. Required fields are marked *